ಹಣಕಾಸು ಸಮಸ್ಯೆ: ದಂಪತಿ ಸೇರಿ ಇಬ್ಬರು ಮಕ್ಕಳು ಸೂಸೈಡ್!

ಹೈದರಾಬಾದ್:- ಹೈದರಾಬಾದ್ನ ಹಬ್ಸಿಗುಡದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದು, ಇಬ್ಬರು ಮಕ್ಕಳು ಕೂಡ ಶವವಾಗಿ ಪತ್ತೆಯಾದ ಘಟನೆ ಜರುಗಿದೆ.
ಹಬ್ಸಿಗುಡ ಪ್ರದೇಶದ ರವೀಂದ್ರನಗರ ಕಾಲೋನಿಯಲ್ಲಿರುವ ನಿವಾಸದಲ್ಲಿ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ಈ ದಂಪತಿ ಮಕ್ಕಳನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗಂಡ-ಹೆಂಡತಿಯ ಮೃತದೇಹ ಬೇರೆಬೇರೆ ಕೋಣೆಗಳಲ್ಲಿ ಪತ್ತೆಯಾಗಿದ್ದು, ಅಪ್ರಾಪ್ತ ಮಕ್ಕಳು ಬೆಡ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಘಟನೆಯ ಬಳಿಕ ನೆರೆಮನೆಯವರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಂಪತಿ ಮೊದಲು ತಮ್ಮ ಮಕ್ಕಳನ್ನು ಕತ್ತು ಹಿಸುಕಿ ಕೊಂದು ನಂತರ ನೇಣು ಹಾಕಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಆತ್ಮಹತ್ಯೆಗೂ ಮುನ್ನ ಪತಿ ಬರೆದಿದ್ದ ಡೆತ್ ನೋಟನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರ್ಥಿಕ ಸಮಸ್ಯೆಗಳು ಮತ್ತು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ
ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಜೀವನವನ್ನು ಕೊನೆಗೊಳಿಸುವುದನ್ನು ಬಿಟ್ಟು ನನಗೆ ಬೇರೆ ದಾರಿ ಇರಲಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ನನ್ನ ವೃತ್ತಿಜೀವನದಲ್ಲಿ ಕಷ್ಟಪಡುತ್ತಿದ್ದೇನೆ ಮತ್ತು ದೈಹಿಕವಾಗಿ ಮತ್ತು ಮಾನಸಿಕವಾಗಿ ಬಳಲುತ್ತಿದ್ದೇನೆ. ನಾನು ಮಧುಮೇಹ, ನರಗಳಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಮೂತ್ರಪಿಂಡದ ಕಾಯಿಲೆಗಳೊಂದಿಗೆ ಹೋರಾಡುತ್ತಿದ್ದೇನೆ ಎಂದು ತೆಲುಗಿನಲ್ಲಿ ಪತಿ ಡೆತ್ ನೋಟ್ ಬರೆದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






