ಹನಿಟ್ರ್ಯಾಪ್ ಪ್ರಕರಣ: ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ - ಜಿ. ಪರಮೇಶ್ವರ್

ಮಾರ್ಚ್ 23, 2025 - 12:00
 0  8
ಹನಿಟ್ರ್ಯಾಪ್ ಪ್ರಕರಣ: ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ - ಜಿ. ಪರಮೇಶ್ವರ್

ಹನಿಟ್ರ್ಯಾಪ್ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ತನಿಖೆಗೆ ವಹಿಸ್ತೇವೆ.

ನಾನು ಸಿಎಂ ಜೊತೆ ಉನ್ನತ ಮಟ್ಟದ ತನಿಖೆ ಬಗ್ಗೆ ಚರ್ಚೆ ಮಾಡ್ತೇನೆ. ಯಾವ ತನಿಖೆಗೆ ಕೊಡಬೇಕು ಅಂತ ಸಿಎಂ ಜೊತೆಗೆ ಚರ್ಚೆ ಮಾಡ್ತೇನೆ. ಈಗಾಗಲೇ ಯಾವ ತನಿಖೆಗೆ ಕೊಡಬೇಕು ಅಂತ ಪ್ರಾಥಮಿಕವಾಗಿ ಅಂದುಕೊಂಡಿದ್ದೇವೆ, ಸಿಎಂ ಜೊತೆಗೆ ಚರ್ಚೆ ಮಾಡಿದ ಬಳಿಕ ಪ್ರಕಟಿಸುತ್ತೇವೆ ಅಂತ ಹೇಳಿದ್ದಾರೆ.

ಹನಿ ಟ್ರ್ಯಾಪ್ಪ್ರಕರಣವನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಇಷ್ಟು ದೊಡ್ಡ ಆರೋಪ ಬಂದಿದೆ, ಗಂಭೀರವಾಗಿ ತಗೊಳ್ಳಲೇಬೇಕಲ್ಲ. ರಾಜಣ್ಣ ಅವರು ಇಷ್ಟೊತ್ತಿಗೆ ದೂರು ಕೊಟ್ಟಿದ್ದರೆ ಯಾವ ಸ್ವರೂಪದ ತನಿಖೆ ಅಂತ ಘೋಷಣೆ ಮಾಡ್ತಿದ್ದೆವು ಎಂದು ತಿಳಿಸಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow