ಹಿಂದೂ ಆಗಿದ್ದಕ್ಕೆ ಹತ್ಯೆ, ಮುಸ್ಲಿಂ ಆಗಿದ್ದಕ್ಕೆ ನಾಚಿಕೆ ಆಗ್ತಿದೆ: ಉಗ್ರರ ದಾಳಿಗೆ ಸಲೀಂ ಮರ್ಚೆಂಟ್ ಕಿಡಿ!

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ಗಾಯಕ ಸಲೀಂ ಮರ್ಚೆಂಟ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ಹಿಂದೂ ಅನ್ನೋ ಕಾರಣಕ್ಕೆ ಈ ದಾಳಿಯಲ್ಲಿ ಅಮಾಯಕರ ಹತ್ಯೆಯಾಗಿದೆ. ಅಮಾಯಕರನ್ನೇ ಟಾರ್ಗೆಟ್ ಮಾಡಲಾಗಿದೆ. ಹತ್ಯೆ ಮಾಡಿದವರು ಮುಸ್ಲಿಂರೇ? ಖಂಡಿತಾ ಅಲ್ಲ. ಅವರು ಭಯೋತ್ಪಾದಕರು ಎಂದಿದ್ದಾರೆ. ಹತ್ಯೆಯನ್ನು ಇಸ್ಲಾಂ ಎಂದು ಒಪ್ಪುವುದಿಲ್ಲ. ಯಾವುದೇ ಧರ್ಮದಲ್ಲಿ ಹೀಗೆಲ್ಲಾ ಇಲ್ಲ. ನಾನೊಬ್ಬ ಮುಸ್ಲಿಂ ಆಗಿದ್ದಕ್ಕೆ ನಾಚಿಕೆ ಆಗುತ್ತಿದೆ. ಇಂತಹ ದಿನಗಳನ್ನು ನೋಡುವಂತೆ ಆಗಿದೆ.
ನನ್ನ ಹಿಂದೂ ಸಹೋದರ ಸಹೋದರಿಯರ ಮೇಲೆ ಅವರು ಕ್ರೂರವಾಗಿ ದಾಳಿ ಮಾಡಿದ್ದಾರೆ. ಅದು ಹಿಂದೂ ಆಗಿರೋದ್ದಕ್ಕೆ, ಇದು ಯಾವಾಗ ಅಂತ್ಯಗೊಳ್ಳುತ್ತೆ ಎಂದು ಅವರು ಪ್ರಶ್ನಿಸಿದ್ದಾರೆ. ಕಳೆದ ಎರಡ್ಮೂರು ವರ್ಷದಿಂದ ಕಾಶ್ಮೀರ ಜನರು ಸಮಸ್ಯೆಗಳಿಂದ ಮುಕ್ತಿ ಪಡೆದು, ಸಹಜ ಜೀವನಕ್ಕೆ ಮರಳುತ್ತಿದ್ದರು. ಈ ದಾಳಿಯಿಂದ ಮತ್ತೆ ಅದೇ ರೀತಿ ಪರಿಸ್ಥಿತಿ ಎದುರಿಸುವಂತಾಗಿದೆ. ನನಗೆ ಯಾವ ರೀತಿಯಲ್ಲಿ ನೋವು ಮತ್ತು ಆಕ್ರೋಶವನ್ನು ವ್ಯಕ್ತಪಡಿಸಬೇಕು ಅಂತ ಅರ್ಥವಾಗುತ್ತಿಲ್ಲ. ನಾನು ಆ ದೇವರಲ್ಲಿ ಕೇಳಿಕೊಳ್ಳುತ್ತೇನೆ, ತೀರಿಕೊಂಡಿರುವ ಆ ವ್ಯಕ್ತಿಗಳ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗಾಯಕ ಸಲೀಂ ಮಾತನಾಡಿದ್ದಾರೆ
ನಿಮ್ಮ ಪ್ರತಿಕ್ರಿಯೆ ಏನು?






