ಹುಬ್ಬಳ್ಳಿಯಲ್ಲಿ ಅಷ್ಟೊಂದು ಜನರ ಮೇಲೆ ಕೇಸ್ ಹಾಕುವ ಅಗತ್ಯವಿಲ್ಲ: ಸಚಿವ ಜಿ ಪರಮೇಶ್ವರ್‌

ಅಕ್ಟೋಬರ್ 14, 2024 - 20:59
 0  10
ಹುಬ್ಬಳ್ಳಿಯಲ್ಲಿ ಅಷ್ಟೊಂದು ಜನರ ಮೇಲೆ ಕೇಸ್ ಹಾಕುವ ಅಗತ್ಯವಿಲ್ಲ: ಸಚಿವ ಜಿ ಪರಮೇಶ್ವರ್‌

 

ಬೆಂಗಳೂರು: ಹುಬ್ಬಳ್ಳಿಯಲ್ಲಿ ಅಷ್ಟೊಂದು ಜನರ ಮೇಲೆ ಕೇಸ್ ಹಾಕುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ವಿಚಾರವಾಗಿ ಟೀಕಿಸುತ್ತಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿಯವರಿಗೆ ಕಾಮಾಲೆ ಕಣ್ಣು, ಕಾಣುವುದೆಲ್ಲವೂ ಹಳದಿ. ಬಿಜೆಪಿಯವರಿಗೆ ಗ್ರೀನ್​ ಕಾಣಲ್ಲ, ಬ್ಲ್ಯೂನೂ ಕಾಣುವುದಿಲ್ಲ. ಎಲ್ಲದರಲ್ಲೂ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.ಕೇಸ್ ವಾಪಸ್ ಪಡೆಯಲು ಯಾರಾದರೂ ಮನವಿ ಮಾಡುತ್ತಾರೆ.

ಆಗ ನಾವು ಅದರ ಪರಿಶೀಲನೆಗೆ ಸಂಪುಟ ಉಪಸಮಿತಿ ರಚನೆ ಮಾಡುತ್ತೇವೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಯಿಂದ ಮಾಹಿತಿ‌ ಕೇಳುತ್ತೇವೆ. ನಂತರ ಸಂಪುಟ ಉಪಸಮಿತಿ ಅದರ ಬಗ್ಗೆ ತೀರ್ಮಾನ ಮಾಡುತ್ತದೆ. ವಾಪಸ್ ತಗೋಬೇಕಾ ಬೇಡವಾ ಎಂದು ನಿರ್ಧರಿಸುತ್ತದೆ. ಹುಬ್ಬಳ್ಳಿಯಲ್ಲಿ ಅಷ್ಟೊಂದು ಜನರ ಮೇಲೆ ಕೇಸ್ ಹಾಕುವ ಅಗತ್ಯವಿಲ್ಲ. ಹಾಗೆಂದು ಸಂಪುಟ ಉಪಸಮಿತಿ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ. ಬಳಿಕ ಸಂಪುಟ ಸಭೆಯಲ್ಲಿ ಕೇಸ್ ವಾಪಸ್ ಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪರಮೇಶ್ವರ ಹೇಳಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow