ಹುಲಿ ಕಾರ್ತಿಕ್ ಮೇಲೆ FIR ದಾಖಲು: ಕಾರಣ ಏನು ಗೊತ್ತಾ!?

ಹಾಸ್ಯ ಕಲಾವಿದ ಹುಲಿ ಕಾರ್ತಿಕ್ ಮೇಲೆ FIR ದಾಖಲಾಗಿದೆ. ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.
ಹಾಸ್ಯ ನಟ ‘ಹುಲಿ’ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್ನ ವಿನ್ ಆಗಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚತ್ತು. ಇತ್ತೀಚೆಗೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಆಗುತ್ತಾರೆ ಎಂದು ವರದಿ ಆಗಿತ್ತು. ಆದರೆ, ಹಾಗಾಗಿಲ್ಲ. ಈಗ ಅವರು ಮಾತನಾಡುವಾಗ ಎಡವಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಬಳಕೆ ಮಾಡಿದ ಪದವು ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಕೇಸ್ ದಾಖಲಾಗಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






