ಹೆಚ್ ಡಿಕೆ ವಿರುದ್ಧ ಸಿಡಿಮಿಡಿ: ರಾಜೀನಾಮೆ ಕೇಳೋದನ್ನು ಬಿಟ್ಟು ಕೇಂದ್ರದಿಂದ ಅನುದಾನ ತನ್ನಿ ಎಂದ ಜಿಟಿ ದೇವೇಗೌಡ!

ಅಕ್ಟೋಬರ್ 3, 2024 - 12:07
 0  14
ಹೆಚ್ ಡಿಕೆ ವಿರುದ್ಧ ಸಿಡಿಮಿಡಿ: ರಾಜೀನಾಮೆ ಕೇಳೋದನ್ನು ಬಿಟ್ಟು ಕೇಂದ್ರದಿಂದ ಅನುದಾನ ತನ್ನಿ ಎಂದ ಜಿಟಿ ದೇವೇಗೌಡ!

ಮೈಸೂರು:- ಸ್ವಪಕ್ಷದ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು, ಈಗ ಎಲ್ಲರೂ ಗಾಜಿನ ಮನೆಯಲ್ಲಿ ಇದ್ದೇವೆ. ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದ್ಯಾ? ಎಫ್‌ಐಆರ್‌ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ ಜೆಡಿಎಸ್‌ನಲ್ಲಿ ಇರುವವರು ರಾಜೀನಾಮೆ ಕೊಡುತ್ತಾರಾ? ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ? ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ ಎಂದು ಪ್ರಶ್ನಿಸಿದರು. 136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಲು ಆಗುತ್ತಾ? ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂದರೆ ನೀಡುವುದಕ್ಕೆ ಸಾಧ್ಯವೇ ಎಂದು ಪ್ರಶ್ನಿಸಿದರು. 

ಒಂದು ಅತ್ಯಾಚಾರ, ಕೊಲೆಯನ್ನು ಮೂರು ತಿಂಗಳು ಮಾಧ್ಯಮ ತೋರಿಸುತ್ತದೆ. ಒಂದು ಎಫ್‌ಐಆರ್‌ ಅನ್ನು ಎಷ್ಟು ದಿನ ತೋರಿಸುತ್ತಿರಾ? ಯಾರ ಯಾರ ಮೇಲೆ ಎಫ್‌ಐಆರ್‌ ಆಗಿದೆಯೋ ಎಲ್ಲರೂ ರಾಜೀನಾಮೆ ಕೊಡಿ. ಎಲ್ಲಾ ವಿಧಾನಸೌಧದ ಮುಂದೆ ನಿಂತುಕೊಳ್ಳಿ. ಬನ್ನಿ ನೋಡೋಣ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ  ಚಾಮುಂಡಿ ದೇವಿಯ ವರಪುತ್ರ. ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ರಾಜಕೀಯ ಆರಂಭಿಸಿ ಇಲ್ಲಿಯವರೆಗೆ ಬೆಳೆದಿದ್ದಾರೆ. ಚಾಮುಂಡಿ ದೇವಿಯ ಆಶೀರ್ವಾದ ಮತ್ತು ಜನರ ಆಶೀರ್ವಾದದಿಂದ ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ.ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಇಬ್ಬರು ಸೇರಿ ಅವರನ್ನು ಸೋಲಿಸಲು ಯತ್ನಿಸಿದೆವು. ಆದರೆ ಚಾಮುಂಡಿ ಆಶೀರ್ವಾದಿಂದ ಸಿದ್ದರಾಮಯ್ಯ ಅಂದು ಜಯಗಳಿಸಿದ್ದು ಎನ್ನುವ ಮೂಲಕ ಸಿಎಂ ಅವರನ್ನು ಹೊಗಳಿದರು.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow