ಹೊಸವರ್ಷದ ಬೆನ್ನಲ್ಲೇ ಕರ್ನಾಟಕ ಜನರಿಗೆ ಬಿಗ್ ಶಾಕ್ ಕೊಟ್ಟ ಸಾರಿಗೆ ಇಲಾಖೆ : ಪ್ರಯಾಣ ದರ ಶೇ.15 ರಷ್ಟು ಏರಿಕೆ!

ಬೆಂಗಳೂರು:- ಹೊಸವರ್ಷದ ಬೆನ್ನಲ್ಲೇ ಕರ್ನಾಟಕ ಜನರಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ಕೊಟ್ಟಿದ್ದು, ಪ್ರಯಾಣ ದರ ಶೇ.15 ರಷ್ಟು ಏರಿಕೆ ಮಾಡಲಿದೆ ಎಂಬ ವರದಿ ಆಗಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ನಾಲ್ಕು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಅದರ ಬೆನ್ನಲ್ಲೇ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಬಿಎಂಟಿಸಿ: ಈ ವರ್ಷ ಆಗಸ್ಟ್ನಲ್ಲಿ ಶೇಕಡಾ 42 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 2014 ರಲ್ಲಿ ಟಿಕೆಟ್ ದರ ಹೆಚ್ಚಳ ಆಗಿತ್ತು ಮತ್ತೆ ಹೆಚ್ಚಳ ಆಗಿರಲಿಲ್ಲ.
ಕೆಎಸ್ಆರ್ಟಿಸಿ: ಶೇಕಡಾ 25 ರಿಂದ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. 2020ರ ಫೆಬ್ರುವರಿಯಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು, ಬಳಿಕ ಮತ್ತೆ ಹೆಚ್ಚಳ ಮಾಡಿಲ್ಲ.
ಕೆಡಬ್ಲ್ಯೂಆರ್ಟಿಸಿ: ಶೇಕಡಾ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. 2020 ರ ಫೆಬ್ರುವರಿಯಲ್ಲಿ ಕೊನೆಯದಾಗಿ ಕೆಡಬ್ಲ್ಯೂಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು.
ಕೆಕೆಆರ್ಟಿಸಿ: ಶೇಕಡಾ 25 ರಿಂದ 30 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ನಲ್ಲೇ ಪ್ರಸ್ತಾವನೆ ಸಲ್ಲಿಸಿತ್ತು. 2020ರ ಫೆಬ್ರುವರಿಯಲ್ಲಿ ಕೆಕೆಆರ್ಟಿಸಿ ಟಿಕೆಟ್ ದರ ಹೆಚ್ಚಳ ಮಾಡಿದ್ದು ಬಿಟ್ಟರೆ ಮತ್ತೆ ಮಾಡಿಲ್ಲ.
ಸದ್ಯ ರಾಜ್ಯದಲ್ಲಿ ಡಿಸೇಲ್ ಬೆಲೆ 88.99 ರೂ. ಇದ್ದ, 2020 ರಲ್ಲಿ ರಾಜ್ಯದಲ್ಲಿ 68 ರೂ ಡಿಸೇಲ್ ಇತ್ತು. ಅದು 2014 ರಲ್ಲಿ ರಾಜ್ಯದಲ್ಲಿ 54 ರಿಂದ 55 ರೂ. ಇತ್ತು.
ನಿಮ್ಮ ಪ್ರತಿಕ್ರಿಯೆ ಏನು?






